
ಕಲಬುರಗಿ,ಮೇ.18: ಜಿಲ್ಲೆಯ ಶಹಾಬಾದ ಪಟ್ಟಣದ ಹಳೇ ಶಹಾಬಾದ ಶಂಕರಲಿಂಗನಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕ್ ಲೀಲ್ಯಾಂಡ್-ಲನಿರ್ಂಗ್ ಲಿಂಕ್ಸ್ ಫೌಂಡೇಷನ್ವತಿಯಿಂದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಜರುಗಿತು
ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷ ಶರಣಗೌಡ ಪಾಟೀಲ್ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸೃಜನಾತ್ಮಕ ಚಟುವಟಿಕೆ ಹೊರಹೊಮ್ಮಲು ಈ ವೇದಿಕೆ ಅವಕಾಶ ಕಲ್ಪಿಸಿದೆ. ಪರಸ್ಪರ ಸಹಬಾಳ್ವೆ, ಪ್ರೀತಿ ವಿಶ್ವಾಸದಿಂದ ಸಾಗುವುದನ್ನು ಶಿಬಿರ ಹೇಳಿಕೊಡಲಿದ್ದು, ಮಕ್ಕಳ ಮುಂದಿನ ವಿಧ್ಯಾಬ್ಯಾಸಕ್ಕೆ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿಕ್ಷಕರಾದ ಭಾಗ್ಯಶ್ರೀ ಮತ್ತು ಸುರೇಖಾ ಅವರು ಬೇಸಿಗೆ ಶಿಬಿರದ ಮಹತ್ವದ ಕುರಿತು ವಿವರಣೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರನ್ನು ಸಬಲೀಕರಣಗೊಳಿಸುವ ಮತ್ತು ಶಿಕ್ಷಣವನ್ನು ಸುಧಾರಿಸುವ ಗುರಿಯನ್ನು ಅಶೋಕ್ ಲೇಲ್ಯಾಂಡ್ ಲನಿರ್ಂಗ್ ಲಿಂಕ್ಸ್ ಫೌಂಡೇಶನ್ – ರೋಡ್ ಟು ಸ್ಕೂಲ್ ಕಾರ್ಯಕ್ರಮ ಹೊಂದಿದೆ. ಈ ಕಾರ್ಯಕ್ರಮವು ಬೋಧನೆ, ಯೋಗಕ್ಷೇಮ ಮತ್ತು ಕೌಶಲ್ಯ ಅಭಿವೃದ್ಧಿ ಸೇರಿದಂತೆ ಕಲಿಕೆಯ ವಿವಿಧ ಅಂಶಗಳ ಮೇಲೆ ಕೇಂದ್ರೀಕರಿಸುತ್ತದೆ. ಸಮಾರಂಭದಲ್ಲಿ ಸಿದ್ದಾರ್ಥ್ ಮತ್ತು ಪಾಲಕರಾದ ಮಡಿವಾಳಪ್ಪ ಸೇರಿದಂತೆ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು.