ಅಭಿವೃದ್ಧಿ, ನಿರ್ಮಾಣ ಕ್ಷೇತ್ರಕ್ಕೆ ವಾಸ್ತುಶಿಲ್ಪಿಗಳ ಕೊಡುಗೆ ಅಪಾರ

ಕಲಬುರಗಿ: ಅ.೬:ಯೋಜನೆಯುತ ಕಾರ್ಯದಿಂದ ಯಶಸ್ಸು ಸಾಧ್ಯವಿದೆ. ಸೂಕ್ತ ವಿನ್ಯಾಸ, ಯೋಜನೆ ಮತ್ತು ಮೇಲ್ವಿಚಾರಣೆಯ ಕಾರ್ಯ ಮಾಡುವ ಮೂಲಕ ಯಾವುದೇ ರೀತಿಯ ಕಟ್ಟಡ, ನಿರ್ಮಾಣ ಕಾರ್ಯಗಳನ್ನು ಮಾಡುವ ವಾಸ್ತುಶಿಲ್ಪಿಗಳ ಕಾರ್ಯ ಪ್ರಮುಖವಾಗಿದೆ. ಇಂದು ನಾವು ಕಾಣುವ ಅದ್ಭುತವಾದ ಕಟ್ಟಡಗಳ ಹಿಂದೆ ಅವರ ಶ್ರಮ ಮರೆಯುವಂತಿಲ್ಲ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ್ ಹೇಳಿದರು.
ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ‘ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಬೆಳಿಗ್ಗೆ ಜರುಗಿದ ‘ವಿಶ್ವ ಆರ್ಕಿಟೆಕ್ಟ್ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಹಿಂದು ಧರ್ಮದಲ್ಲಿ ವಿಶ್ವಕರ್ಮ ಅವರನ್ನು ಪ್ರಥಮ ವಾಸ್ತುಶಿಲ್ಪಿ ಎಂದು ಉಲ್ಲೇಖಿಸಲಾಗಿದೆ. ಹಿನ್ನಲೆ ಗಮನಿಸಿದಾಗ ಪ್ರತಿವರ್ಷ ಅಕ್ಟೋಬರ್ ತಿಂಗಳಿನ ಮೊದಲನೇ ಸೋಮವಾರದಂದು ವಾಸ್ತುಶಿಲ್ಪಿಗಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ‘ಫ್ರಾಂಕ್ ಲಿಯಾಡ್ ರೈಟ್’ ಎಂಬ ಅಮೇರಿಕನ್ ಆರ್ಕಿಟೆಕ್ಟ್ ಅವರ ಸ್ಮರಣಾರ್ಥವಾಗಿ ಇದನ್ನು ಆಚರಿಸಲಾಗುತ್ತದೆ. ಇಟಲಿ, ಜೆರ್ಮನಿ, ಸ್ಪೇನ್, ಯುಕೆ, ಫ್ರಾನ್ಸ್, ಜಪಾನ್, ಕೆನಡಾ, ಆಸ್ಟೆçÃಲಿಯಾ, ನೆದರಲ್ಯಾಂಡ್ ಮತ್ತು ಚೀನಾ ದೇಶಗಳು ಪ್ರಸಿದ್ಧ ವಾಸ್ತುಶಿಲ್ಪ ರಾಷ್ಟçಗಳಾಗಿವೆ. ನಮ್ಮ ದೇಶವು ಕೂಡಾ ಈ ನಿಟ್ಟಿನಲ್ಲಿ ಸಾಧನೆಯಲ್ಲಿದೆ. ಭಾರದತ ಆಧುನಿಕ ವಾಸ್ತುಶಿಲ್ಪಿ ಎಂದು ಬಿ.ವಿ ದೇಸಾಯಿ ಅವರನ್ನು ಕರೆಯಲಾಗುತ್ತದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಯುವಕರು ಇದರ ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಅಧ್ಯಕ್ಷ ಅಮರ ಜಿ.ಬಗರಗಿ, ಪ್ರಮುಖರಾದ ಅಸ್ಲಾಂ ಶೇಖ್, ಮಹಾದೇವಪ್ಪ ಎಚ್.ಬಿರಾದಾರ ಹಾಗೂ ವಿದ್ಯಾರ್ಥಿಗಳಿದ್ದರು.