ಕಲಬುರಗಿ:ಜೂ.27:ಬಾಲ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರನ್ನು ಜಾರಿಗೆ ತರಲಾಗಿದೆ ಎಂದು ಜೇವರ್ಗಿ ತಾಲೂಕಾ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ಕಾಶಿನಾಥ ವಿ ಉಪ್ಪಾರ ಅವರು ಹೇಳಿದರು.
ಜೇವರ್ಗಿ ತಾಲೂಕಾ ಕಾನೂನು ಸೇವಾ ಸಮಿತಿ, ತಾಲೂಕಾ ನ್ಯಾಯವಾದಿಗಳ ಸಂಘ, ತಾಲೂಕಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಮಕ್ಕಳ ಸಹಾಯವಾಣಿ-1098/112 ಕಲಬುರಗಿ ಇವುಗಳÀ ಸಂಯುಕ್ತಾಶ್ರಯದಲ್ಲಿ ಚನ್ನೂರ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪಾ ಆರ್ ಹಳಿಮನಿ ಅವರು ಮಾತನಾಡಿ, ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು, ಒಂದು ವೇಳೆ ಕೆಲಸಕ್ಕೆ ನೇಮಿಸಿದ್ದÀಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ರಿಂದ 50,000 ರೂ. ಗಳÀ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಗೌರವಾನ್ವಿತ ಭಾರತದ ಸವೋಚ್ಛ ನ್ಯಾಯಾಲಯವು ರೀಟ್ ಅರ್ಜಿ (ಸಿವಿಲ್) ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜನೆಗೊಂಡ ಪ್ರತಿ ಮಗುವಿಗೆ 20,000 ರೂ.ಗಳ ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಜೇವರ್ಗಿ ತಹಶೀಲ್ದಾರ ಮಲ್ಲಣ್ಣಾ ಯುಗೋಡ್ ಅವರು ಮಾತನಾಡಿ, ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986 ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಹಾಗೂ ಸಂಸ್ಥೆಯ (ವಾರೆಂಟ್ ರಹಿತ ಬಂದಿಸಬಹುದಾದ) ಅಪರಾಧವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜೇವರ್ಗಿ ಸಹಾಯಕ ಸರಕಾರಿ ಅಭಿಯೋಜಕ ನಾಗವಣಿ ಧನ್ನಾ, ಜೇವರ್ಗಿ ತಾಲೂಕಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಸೂಗೂರು, ನ್ಯಾಯವಾದಿ ಅಪ್ಪಸಾಬ ಕೋಳಕೂರು, ಸಿಡಿಪಿಓ ಎಸ್ ಎಂ ಪಾಟೀಲ್, ಪೆÇಲೀಸ್ ವೃತ್ತ ನಿರೀಕ್ಷಕ ರಾಜಾಸಾಬ್ ನದಾಫ್, ಕಲಬುರಗಿ 3ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಕೆ.ಎಸ್.ಪ್ರಸನ್ನ, ಡಿಇಓ ಅನಂತ ಜೋಶಿ, ಡಾನ್ ಭಾಸ್ಕೋ ಸಂಸ್ಥೆ ಮತ್ತು ಮಾರ್ಗದರ್ಶಿ ಸಂಸ್ಥೆ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಮತ್ತು ಮುಖ್ಯಗುರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಶಾಂತಕುಮಾರ ಅವರು ವಂದಿಸಿದರು.