
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜೂ.20: ನಗರದಲ್ಲಿ ಜಿಲ್ಲಾ ಕುರುಬರ ಸಂಘದಿಂದ ನಿರ್ಮಾಣ ಮಾಡುತ್ತಿರುವ ಸಮುದಾಯ ಭವನ (ಕನಕ ಕಲ್ಯಾಣ ಮಂಟಪ) ಕಟ್ಟಡ ನಿರ್ಮಾಣಕ್ಕಾಗಿ ಅಂತಿಮ ಕಂತಿನ ರೂ.50 ಲಕ್ಷಗಳ ಅನುದಾನ ಬಿಡುಗಡೆ ಮಾಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಮೋಹನ್ ಅಲ್ಲಿಪುರ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನವನ್ನು ಶೀಘ್ರವೇ ಮಂಜೂರಾತಿ ಮಾಡಯವುದಾಗಿ ಭರವಸೆಯನ್ನು ನೀಡಿಧದಾರಂತೆ.


























