Home ಜಿಲ್ಲೆ ಮಂಗಳೂರು ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಡಯೆಟ್ ಮತ್ತು ನ್ಯೂಟ್ರಿಷನ್ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. (ಡಾ.) ಗೀತಾ ಬಿ. ಶೆಟ್ಟಿಯವರು ಪುಣೆಯ ಕೇಂದ್ರ ಆಯುಷ್ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿಯ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ದಿನಾಂಕ ೨೧.೦೮.೨೦೨೬ರಂದು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಶೆಟ್ಟಿಯವರು ವಹಿಸಿ, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ವೇದಿಕೆಯಲ್ಲಿ ಡಾ. ಬಾಲಕೃಷ್ಣ ಶೆಟ್ಟಿ, ಡಾ. ಬಿಂದು ಹಾಗೂ ಎಸ್‌ಡಿಎಂ ಆಸ್ಪತ್ರೆ, ಉಜಿರೆಯ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಜನಾರ್ದನ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಡಾ. ಗೀತಾ ಬಿ. ಶೆಟ್ಟಿಯವರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರ ಸರಳತೆ, ಸಮರ್ಪಣಾ ಮನೋಭಾವ, ಬೋಧನಾ ಕ್ಷೇತ್ರದ ಸೇವೆ ಹಾಗೂ ಪ್ರಕೃತಿ ಚಿಕಿತ್ಸೆಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಲಾಯಿತು. ಶ್ರೀ ಜನಾರ್ದನ್ ಅವರು ಮಾತನಾಡಿ, ಡಾ. ಗೀತಾ ಬಿ. ಶೆಟ್ಟಿಯವರ ಹೊಸ ಜವಾಬ್ದಾರಿಯು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಮುಂದಿನ ಸೇವಾ ಪಯಣಕ್ಕೆ ಶುಭ ಹಾರೈಸಿದರು.
ನಂತರ ಡಾ. ಗೀತಾ ಬಿ. ಶೆಟ್ಟಿಯವರು ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡು, ಸಂಸ್ಥೆ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳಿಂದ ದೊರೆತ ಸಹಕಾರ ಮತ್ತು ಪ್ರೋತ್ಸಾಹವನ್ನು ಸ್ಮರಿಸಿದರು. ಹೊಸ ಜವಾಬ್ದಾರಿಯಲ್ಲಿ ಪ್ರಕೃತಿ ಚಿಕಿತ್ಸೆಯ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡುವ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಸಮಾರೋಪದಲ್ಲಿ ಡಾ. ಗೀತಾ ಬಿ. ಶೆಟ್ಟಿ ಹಾಗೂ ಡಾ. ಬಾಲಕೃಷ್ಣ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಶ್ವೇತಾ ಇವರು ಧನ್ಯವಾದ ಸಮರ್ಪಣೆ ಯನ್ನು ಸಲ್ಲಿಸಿದರು ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.