
ಸೀಬೆ ಎಂದರೆ ಎಲ್ಲರಿಗೂ ಇಷ್ಟ. ಈ ಹಣ್ಣುರುಚಿಯಾಗಿರುತ್ತದೆ.ಸೀಬೆಗೆ ಇನ್ನೊಂದು ಹೆಸರು ಪೇರಲ. ಮಾಗಿದಾಗ ವಿಶಿಷ್ಟ ಪರಿಮಳ ಹರಡುತ್ತದೆ. ಇದು ನೋಡಲೂ ಸಹ ಆಕರ್ಷಕವಾಗಿರುತ್ತದೆ. ಶ್ರಾವಣ ಬಂತು ಎಂದರೆ ಎಲ್ಲಿ ನೋಡಿದರೂ ಸೀಬೆಯೇ. ದೋರೆಗಾಯಿ ಇದ್ದಾಗಸೀಬೆಯಲ್ಲಿ ಸಿಹಿ, ಹುಳಿ ಮತ್ತು ಒಗರು ಮಿಳಿತಗೊಂಡಿದ್ದು ತಿನ್ನಲು ಬಲು ರುಚಿಯಾಗಿರುತ್ತದೆ.
ಸೀಬೆಗೆ ಸಂಸ್ಕೃತದಲ್ಲಿ ಅಮೃತಫಲಂ ಎಂದರೆ,ಹಿಂದಿಯಲ್ಲಿ ಅಮೃದ್, ತೆಲುಗಿನಲ್ಲಿ ಜಾಮ್, ತಮಿಳಿನಲ್ಲಿ ಕೊಯ್ಯಾಪಳಂ ಹಾಗೂ ಇಂಗ್ಲಿಷ್ನಲ್ಲಿಗೋವಾ ಎಂದು ಕರೆಯುತ್ತಾರೆ. ಸೀಬೆ ಹಣ್ಣಿನಲ್ಲಿ ಶರೀರಕ್ಕೆ ಅಗತ್ಯವಿರುವ ವಿವಿಧ ಪೆÇೀಷಕಾಂಶಗಳು ಸಾಕಷ್ಟಿವೆ. ಹಣ್ಣುದೊರೆಯುವ ಅವಧಿಯಲ್ಲಿ ಯಥೇಚ್ಛವಾಗಿ ಬಳಸಿ ಲಾಭಹೊಂದಬೇಕು. ಅತ್ಯಧಿಕ ಔಷಧೀಯ ಗುಣವಿರುವ ಇದು ಹಿತ್ತಲಗಿಡ. ಇದರ ಬೆಲೆಯೂ ಕಡಿಮೆಯಿದ್ದು, ಆರೋಗ್ಯಕ್ಕೆ ಹೆಚ್ಚು ಉಪಯುಕ್ತ.
ಹಸಿರು ಕಾಯಿ ಒಗರಾಗಿರುತ್ತದೆ.
ದೋರೆಗಾಯಿ ಹೆಚ್ಚು ರುಚಿಯಾಗಿರುತ್ತದೆ. ಅಧಿಕ ಪ್ರಮಾಣದ ಶರ್ಕರ ಪಿಷ್ಟಗಳ ಜೊತೆಗೆ ಪೆÇ್ರೀಟೀನು, ಸುಣ್ಣ, ರಂಜಕ, ಕಬ್ಬಿಣ ಹಾಗೂ ಕ್ಯಾಲೊರಿ ಸತ್ವಗಳಿರುತ್ತವೆ.’ಸಿ’ ಅನ್ನಾಂಗದ ಜೊತೆಗೆ ಇತರ ಅನ್ನಾಂಗಗಳು ಸ್ವಲ್ಪ ಮಟ್ಟಿಗೆ ಇರುತ್ತದೆ.ದೋರೆಗಾಯಿಗಳಲ್ಲಿ ಅಧಿಕ ಪೆಕ್ಟಿನ್ ಅಂಶವಿರುತ್ತದೆ.
ಸೀಬೆಹಣ್ಣನ್ನು ರುಚಿಗೋಸ್ಕರ ಇಲ್ಲವೇ ಆಹಾರವಾಗಿ ಬಳಸುವುದು ಮಾತ್ರವಲ್ಲ, ಅದು ಉತ್ತಮ ಔಷಧಿಯ ಗುಣ ಸಹ ಹೊಂದಿದೆ. ಅಧಿಕ ಪ್ರಮಾಣದ ಪೆÇ್ರೀಟೀನು ಇರುವ ಕಾರಣಮಾಂಸಖಂಡಗಳನ್ನು ಬಲಪಡಿಸಬಲ್ಲದು. ನಾರಿನ ಅಂಶ ಅಧಿಕವಿರುವ ಕಾರಣ ತಿಂದ ಆಹಾರ ಕರುಳುಗಳಲ್ಲಿ ಸುಲಭವಾಗಿ ಚಲಿಸುವಂತೆ ಮಾಡಬಲ್ಲದು. ಆದ್ದ-ರಿಂದ ಮಲಬದ್ಧತೆಗೆ ಇದು ದಿವೌಷಧ. ಈ ಉದ್ದೇಶಕ್ಕಾಗಿ
ರಾತ್ರಿ ಊಟದ ನಂತರ ಪ್ರತಿ ನಿತ್ಯ ಒಂದೆರೆಡು ಹಣ್ಣುಗಳನ್ನು ತಿಂದಲ್ಲಿ ಮುಂಜಾನೆ ಸುಖ ವಿರೇಚನ ಸಾಧ್ಯ.
ಹಣ್ಣುಗಳಲ್ಲಿರುವ ಕಬ್ಬಿಣದ ಅಂಶ ರಕ್ತಶುದ್ಧಿಗೆ ಸಹಾಯಕ. ಇದು ‘ಸಿ’ ಅನ್ನಾಂಗದ ಒಳ್ಳೆಯ ಮೂಲವಾದ್ದರಿಂದ ಹಲ್ಲಿನ ಒಸಡುಗಳು ಗಟ್ಟಿಗೊಳ್ಳುತ್ತವೆ. ಹಾಗೂ ಸ್ಕರ್ವಿ ರೋಗವನ್ನು ದೂರ ಮಾಡಬಲ್ಲದು.
ಸೀಬೆಯಲ್ಲಿ ಬೆಟಾ ಕೆರಾಟಿನ್, ಪೆÇಟ್ಯಾಶಿಯಂ ಮತ್ತು ಫೈಬರ್ ಅಂಶಹೆಚ್ಚಾಗಿರುವುದರಿಂದ ಇದು ಹೆಚ್ಚುಉಪಯೋಗಕಾರಿಯಾಗಿದ್ದು ರಕ್ತದಲ್ಲಿನ ಸಕ್ಕರೆ ಅಂಶ ಮತ್ತು ಕೊಲೆಸ್ಟ್ರಾಲ್ ನಿಯಂತ್ರಿಸುವ ಗುಣವನ್ನು ಹೊಂದಿದೆ ಹಾಗೂ ಹೃದಯದ ಸ್ವಾಸ್ಥ್ಯವನ್ನು ಕಾಪಾಡುತ್ತದೆ.
ತೂಕಕಡಿಮೆ ಮಾಡಿಕೊಳ್ಳಬೇಕೆಂದಿದ್ದರೆ ಸೀಬೆಹಣ್ಣುಒಳ್ಳೆಆಯ್ಕೆ.ಸೀಬೆಯಲ್ಲಿ ಅವಶ್ಯಕ ಕಾರ್ಬೊಹೈಡ್ರೆಟ್ ಮತ್ತುಫೈಬರ್ ಇರುವುದರಿಂದ ಬೊಜ್ಜನ್ನು ನಿಯಂತ್ರಿಸುತ್ತದೆ. ಸೀಬೆಯಲ್ಲಿ ಕೊಬ್ಬಿನಾಂಶಕೇವಲ 0.9 ಇದ್ದು, 84 ಕ್ಯಾಲೊರಿ ಮಾತ್ರ ಇರುತ್ತದೆ.ಸೇಬು ಹಣ್ಣಿಗೆ ಹೋಲಿಸಿದರೆ ಸೀಬೆಯಲ್ಲಿ ಶೇ 42 ರಷ್ಟು ಕಡಿಮೆ ಕ್ಯಾಲೊರಿ ಮತ್ತು ಶೇ.38 ರಷ್ಟು ಕಡಿಮೆ ಕೊಬ್ಬಿನಾಂಶವಿದೆ.
ಮಕ್ಕಳಿಗೆಕೆಲವರು ಈಹಣ್ಣನ್ನು ತಿನ್ನಲು ಕೊಡುವುದಿಲ್ಲ ಅದಕ್ಕೆ ಕಾರಣ ಅವು ಕೆಮ್ಮನ್ನುಂಟುಮಡುತ್ತವೆ ಎಂಬ ಶಂಕೆ. ಆದರೆ ಇದು ತಪ್ಪು.ಎಳೆಯ ಮಕ್ಕಳಿಗೆ ಸಾಕಷ್ಟು ಹಣ್ಣನ್ನು ಕೊಡುತ್ತಿದ್ದಲ್ಲಿ ‘ಸಿ’ ಅನ್ನಾಂಗದ ಅಭಾವ ತಾನೇ ತಾನಾಗಿ ನಿವಾರಣೆಯಾಗುತ್ತದೆ.
ನುಣ್ಣಗೆ ಕುಟ್ಟಿ ಪುಡಿಮಾಡಿದ ಎಲೆಗಳನ್ನು ಸಂಧಿವಾತದಲ್ಲಿ ಬಳಸುತ್ತಾರೆ. ಅವುಗಳ ತಿಳಿರಸ ಅಪಸ್ಮಾರಕ್ಕೆ ಒಳ್ಳೆಯ ಔಷಧಿ. ಎಲೆಗಳನ್ನು ಕುದಿಸಿ ತೆಗೆದ ನೀರನ್ನು ಮುಕ್ಕಳಿಸುತ್ತಿದ್ದಲ್ಲಿ ಒಸಡುಗಳ ಊತ ಮತ್ತು ಹಲ್ಲು ನೋವು ತಗ್ಗುತ್ತದೆ.
ಸೀಬೆ ಮರದ ಎಲೆಗಳನ್ನು ಅರೆದು ಗಾಯ ಹಾಗೂ ವ್ರಣಗಳಿಗೆ ಪಟ್ಟು ಹಾಕುವುದುಂಟು.




























