Home ಜಿಲ್ಲೆ ಹೊಸಳ್ಳಿ ಹಸು ಸಾವು ಪರಿಹಾರಕ್ಕೆ ಆಗ್ರಹ

ಹೊಸಳ್ಳಿ ಹಸು ಸಾವು ಪರಿಹಾರಕ್ಕೆ ಆಗ್ರಹ

(ಸಂಜೆವಾಣಿ ವಾರ್ತೆ)

ಬಳ್ಳಾರಿ:ಮೇ.17-  ಪಶು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಸು ಮೃತಪಟ್ಟಿದ್ದು, ಅದರ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶರಣಬಸವ ಅವರು ಜಿಲ್ಲಾ ಪಶು ವೈದ್ಯಾಧಿಕಾರಿ ಸದಾಶಿವ ಉಪ್ಪಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. .

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಬಗ್ಗೂರು ಗ್ರಾಮದ ರೈತ ಮಲ್ಕಪ್ಪ ಅವರಿಗೆ ಸೇರಿದ ಹಸು, ಎಮ್ಮೆ, ಕರುವಿಗೆ ಹೀಟ್ ಸ್ಟೋಕ್ ಆಗಿತ್ತು. ರಾರಾವಿ ಪಶು ವೈದ್ಯಕೀಯ ಆಸ್ಪತ್ರೆಗೆ ಬೀಗ ಹಾಕಿತ್ತು. ಗ್ರಾಮ ಮತ್ತು ತಾಲ್ಲೂಕು ಪಶು ವೈದ್ಯಾಧಿಕಾರಿಗೆ ಕರೆ ಮಾಡಿದರೂ, ಅವರು ಸ್ವೀಕರಿಸಲಿಲ್ಲ. ಸಕಾಲಕ್ಕೆ ಚಿಕಿತ್ಸೆ ಸಿಗದೆ ಹಸು ಮೃತಪಟ್ಟಿದೆ.1962 ಸಹಾಯವಾಣಿಗೆ ಕರೆ ಮಾಡಿದರೆ, ವಾಹನ ರಿಪೇರಿ ಇದೆ ಎಂದರು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ.